ಶಿವಮೊಗ್ಗ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ; ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಶಾಸಕ ಡಾ. ಧನಂಜಯ ಸರ್ಜಿ

SHIVAMOGGA ; ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ, ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯವನ್ನು ತುಂಬಿದ್ದೀರಾ ಎಂದು ಶಾಸಕ ಡಾ.ಧನಂಜಯ ಸರ್ಜಿ ಅವರು ಸರ್ಕಾರವನ್ನು ಪ್ರಶ್ನಿಸಿದರು.

WhatsApp Group Join Now
Telegram Group Join Now
Instagram Group Join Now

ಬೆಳಗಾವಿಯಲ್ಲಿ ನಡೆಯುತ್ತಿರುವ 154ನೇ ವಿಧಾನಪರಿಷತ್ ಕಲಾಪದಲ್ಲಿ ಮಂಗಳವಾರ ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಭಾಣಂತಿಯರ ಸರಣಿ ಸಾವಿನ ಬಳಿಕ ಆಸ್ಪತ್ರೆಗೆ ಹೆರಿಗೆ ಮತ್ತು ಇತರೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಕ್ಷೀಣಿಸಿದೆ. ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ 580 ಹೆರಿಗೆ, ಅಕ್ಟೋಬರ್‌ನಲ್ಲಿ 577 ಹಾಗೂ ಬಾಣಂತಿಯರ ಸಾವಿನ ಪ್ರಕರಣ ನಡೆದ ನಂತರ 289 ಹೆರಿಯಾದರೆ, ಡಿಸೆಂಬರ್ 14 ರ ಅಂಕಿ ಅಂಶದಂತೆ 74 ಹೆರಿಯಾಗಿದೆ, ಗರ್ಭಿಣಿಯರು ಆತಂಕಗೊಂಡು ಬಳ್ಳಾರಿ ಆಸ್ಪತ್ರೆಗೆ ಬರುವುದು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ, ಆ ಭಾಗದ ಜನ ಮತ್ತು ರಾಜ್ಯದ ಪುನಾ ಆಸ್ಪತ್ರೆಗೆ ಬರಲು ಯಾವ ರೀತಿಯ ಆತ್ಮಸ್ಥೈರ್ಯವನ್ನು ನೀಡಿದ್ದೀರಾ? ಎಂದು ಪ್ರಶ್ನಿಸಿದರು.

ಪ್ರೊಜನ್ ರಿಂಗರ್ ಲ್ಯಾಕ್ಟೆಡ್ಎಂಬ ಮೆಡಿಸಿನ್ ನಿಂದ ಸಮಸ್ಯೆ ಎದುರಾಗಿದೆ ಎಂದು ಸಚಿವರು ಹೇಳುತ್ತಿದ್ದಾರೆ, ಆದರೆ ಸಾಮಾನ್ಯವಾಗಿ ರಿಂಗರ್ ಲ್ಯಾಕ್ಟೆಡ್ ಮೆಡಿಸನ್ ಅನ್ನು ಫ್ರೀಜ್ ಮಾಡುವ ಹಾಗೆ ಇಲ್ಲ ಹಾಗೂ ಅಷ್ಟು ದೊಡ್ಡ ಜಿಲ್ಲಾಸ್ಪತ್ರೆಯಲ್ಲಿ ಆ ಮೆಡಿಸಿನ್ ಬಾಣಂತಿಯರಿಗೆ ಮಾತ್ರ ನೀಡಿರುವುದಿಲ್ಲ. ಬೇರೆ ರೋಗಿಗಳಿಗೂ ಬಳಸಿರುತ್ತಾರೆ. ಆದರೆ ಬೇರೆ ರೋಗಿಗಳಿಗೆ ಅಷ್ಟು ಸಮಸ್ಯೆ ಆಗದ ಈ ಮೆಡಿಸನ್ ಬಾಣಂತಿಯರಿಗೆ ಮಾತ್ರ ಯಾಕೆ ಇಷ್ಟೊಂದು ಸಮಸ್ಯೆಯಾಗಿದೆ? ಎಂದು ಸರ್ಕಾರವನ್ನು ಪ್ರಶ್ನಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಐವಿ ಪ್ಲ್ಯೂಡ್ ನ ರಿಯಾಕ್ಸ ನ್ ಆಗುವ ಸಾಧ್ಯತೆ ತೀರಾ ಕಡಿಮೆ. ಐವಿ ಪ್ಲ್ಯೂಡ್ ನ ಬಹು ಅಂಗಾಂಗಳಿಗೆ ತೊಂದರೆಯಾಗಿದೆ ಎಂಬ ವರದಿ ಇದೆ, ಸಮಸ್ಯೆ ಆಗುವುದಾದರೆ ಇತರರಿಗೂ ಆಗಬೇಕಿತ್ತು. ಹಾಗಾಗಿಲ್ಲ, ಹಾಗಿದ್ದರೆ ಐವಿಫ್ಯೂ ಅವಧಿ ಮುಗಿದಿತ್ತಾ? ಇಲ್ಲವೇ ಫಂಗಸ್ ಬೆಳೆದಿತ್ತಾ? ಯಾಕಾಗಿ ಅದೇ ಕಂಪನಿಯಿಂದ ಖರೀದಿಸಲಾಗುತ್ತಿದೆ. ದರವೆಷ್ಟು? ಬೇರೆ ಕಂಪನಿಗಳಿಗೂ ಇದಕ್ಕೂ ಇರುವ ವ್ಯತ್ಯಾಸವೇನು? ಆ ಕಂಪನಿಯನ್ನೇ ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರವನ್ನು ಡಾ.ಧನಂಜಯ ಸರ್ಜಿ ಆಗ್ರಹಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]