Chikkamagaluru

ಚಿಕ್ಕಮಗಳೂರು ; ಹಿರೇಕೊಳಲೆ ಕೆರೆಗೆ ಶಾಸಕ ಹೆಚ್.ಡಿ ತಮ್ಮಯ್ಯರಿಂದ ಬಾಗಿನ ಅರ್ಪಣೆ

ಚಿಕ್ಕಮಗಳೂರು ; ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಸೋಮವಾರ ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು 40 ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ 40 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು.

ಅಮೃತ್ ಯೋಜನೆಯಡಿ 24 ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದರಿಂದ ಇನ್ನು ಎರಡು ವರ್ಷಗಳ ಕಾಲ ನಗರದ ಜನರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.

ನರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ತಹಶೀಲ್ದಾರ್ ರೇಷ್ಮಾಶೆಟ್ಟಿ, ಉಪಾಧಕ್ಷ ಅನುಮಧುಕರ್, ಹಿರೇಕೊಳಲೆ ಗ್ರಾ.ಪಂ ಅಧಕ್ಷೆ ಕವಿತಾ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗಾಮಸ್ಥರು ಮುಂತಾದವರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>