ಹೊಸನಗರ ; ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಅಡಿಕೆ ಸಂಸ್ಥೆಗಳಲ್ಲಿ ಒಂದಾಗಿರುವ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ ಶಿವಮೊಗ್ಗ ಇವರು ತನ್ನ ವಿವಿಧ ಶಾಖಾ ಸದಸ್ಯರ ಸಮಾಲೋಚನಾ ಸಭೆಯನ್ನು ಬೇರೆ-ಬೇರೆ ತಾಲ್ಲೂಕು ಶಾಖೆಗಳಲ್ಲಿ ನಡೆಸುತ್ತಿದ್ದು ಅದರಂತೆ ಹೊಸನಗರದಲ್ಲಿ ಜುಲೈ 22ರ ಬುಧವಾರ ಸರ್ವ ಸದಸ್ಯರ ಸಮಾಲೋಚನಾ ಸಭೆಯನ್ನು ಬಸ್ ನಿಲ್ದಾಣದ ಹಿಂಭಾಗವಿರುವ ಚೌಡಮ್ಮ ರಸ್ತೆಯ ಸಂಘದ ಸ್ವಂತ ಕಟ್ಟಡದ ಆವರಣದಲ್ಲಿ ಮಧ್ಯಾಹ್ನ 3.30ಕ್ಕೆ ಏರ್ಪಡಿಸಲಾಗಿದೆ ನಿರ್ದೇಶಕ ಬರುವೆ ಶ್ರೀಕಾಂತ್ ತಿಳಿಸಿದ್ದಾರೆ.
ಈ ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಮಾಮ್ಕೋಸ್ ಸಂಸ್ಥೆಯ ಉಪಾಧ್ಯಕ್ಷರಾದ ಎಚ್.ಎಸ್. ಮಹೇಶ್ ಹುಲ್ಕುಳಿ ವಹಿಸಲಿದ್ದು ಸಂಘದ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ ಸಂಘದ ಎಲ್ಲ ನಿರ್ದೇಶಕರುಗಳು ಈ ಸಭೆಗೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

