ಹೊಸನಗರ ; ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಅಡಿಕೆ ಸಂಸ್ಥೆಗಳಲ್ಲಿ ಒಂದಾಗಿರುವ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ ಶಿವಮೊಗ್ಗ ಇವರು ತನ್ನ ವಿವಿಧ ಶಾಖಾ ಸದಸ್ಯರ ಸಮಾಲೋಚನಾ ಸಭೆಯನ್ನು ಬೇರೆ-ಬೇರೆ ತಾಲ್ಲೂಕು ಶಾಖೆಗಳಲ್ಲಿ ನಡೆಸುತ್ತಿದ್ದು ಅದರಂತೆ ಹೊಸನಗರದಲ್ಲಿ ಜುಲೈ 22ರ ಬುಧವಾರ ಸರ್ವ ಸದಸ್ಯರ ಸಮಾಲೋಚನಾ ಸಭೆಯನ್ನು ಬಸ್ ನಿಲ್ದಾಣದ ಹಿಂಭಾಗವಿರುವ ಚೌಡಮ್ಮ ರಸ್ತೆಯ ಸಂಘದ ಸ್ವಂತ ಕಟ್ಟಡದ ಆವರಣದಲ್ಲಿ ಮಧ್ಯಾಹ್ನ 3.30ಕ್ಕೆ ಏರ್ಪಡಿಸಲಾಗಿದೆ ನಿರ್ದೇಶಕ ಬರುವೆ ಶ್ರೀಕಾಂತ್ ತಿಳಿಸಿದ್ದಾರೆ.
ಈ ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಮಾಮ್ಕೋಸ್ ಸಂಸ್ಥೆಯ ಉಪಾಧ್ಯಕ್ಷರಾದ ಎಚ್.ಎಸ್. ಮಹೇಶ್ ಹುಲ್ಕುಳಿ ವಹಿಸಲಿದ್ದು ಸಂಘದ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ ಸಂಘದ ಎಲ್ಲ ನಿರ್ದೇಶಕರುಗಳು ಈ ಸಭೆಗೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





