ಹೊಸನಗರ ; ಆ. 13ರ ಬುಧವಾರ ಮಧ್ಯಾಹ್ನ 3:30ಕ್ಕೆ ಮಾಮ್ಕೋಸ್ ಷೇರುದಾರರ ಸಭೆಯನ್ನು ಮಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿಯವರ ಅಧ್ಯಕ್ಷತೆಯಲ್ಲಿ ಚೌಡಮ್ಮ ರಸ್ತೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮಾಮ್ಕೋಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮ್ಯಾಮ್ಕೋಸ್ ನಿರ್ದೇಶಕ ಕೆ.ವಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಸಹಕಾರ ಭಾರತಿ ಕರ್ನಾಟಕ ಮಾಮ್ಕೋಸ್ ಪೇರುದಾರರು ಬುಧವಾರ ಮಧ್ಯಾಹ್ನ 3:30ಕ್ಕೆ ಷೇರುದಾರರ ಸಮಾಲೋಚನಾ ಸಭೆಯಲ್ಲಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಈ ಸಭೆಗೆ ಎಲ್ಲ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಆಗಮಿಸಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ಎಲ್ಲ ಮಾಮ್ಕೋಸ್ನ ಎಲ್ಲ ಷೇರುದಾರರು ಆಗಮಿಸಿ ಈ ಸಭೆಯನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ನಿರ್ದೇಶಕ ಧಮೇಂದ್ರ ಹೆಚ್, ಮಾಮ್ಕೋಸ್ ಹೊಸನಗರ ಶಾಖೆಯ ವ್ಯವಸ್ಥಾಪಕರು, ಮಾಮ್ಕೋಸ್ನ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.