ಚಿಕ್ಕಮಗಳೂರು ; ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜಿಲ್ಲಾಡಳಿತದ ವಿರೋಧದ ನಡುವೆ ವಿ.ಎಚ್.ಪಿ. ಹಾಗೂ ಬಜರಂಗದಳ ಕಾರ್ಯಕರ್ತರು ಕಾಫಿನಾಡು ಬಂದ್ಗೆ ಕರೆ ನೀಡಿದ್ದು ಈ ವೇಳೆ ಮೆರವಣಿಗೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂದ್ಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿದ್ದು ಈ ನಡುವೆ ಜಿಲ್ಲಾಡಳಿತದ ವಿರೋಧದ ನಡುವೆ ಓಂಕಾರೇಶ್ವರ ದೇವಸ್ಥಾನದಿಂದ ಹನುಮಂತಪ್ಪ ವೃತ್ತದವರೆಗೂ ಹಿಂದೂ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಹಿನ್ನೆಲೆ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.