Chikkamagaluru

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗಿನಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತನ್ನ ಮಗಳನ್ನು ಕರೆದುಕೊಂಡು ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.

ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಅಂಗನವಾಡಿಗೆ ವಿಷಯ ತಿಳಿಸಿದ್ದಾರೆ. ವೈದ್ಯರೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಅನಾಥ ಮಗು ಪತ್ತೆಯಾಗಿದ್ದು, ಪೋಷಕರನ್ನು ಪತ್ತೆ ಹಚ್ಚಿಕೊಡುವಂತೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಹಜ ಸ್ಥಿತಿಗೆ ಬಂದ ನಂತರ ದತ್ತು ಕೇಂದ್ರಕ್ಕೆ ಕರೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>