Accident

ಸಂಸದ ಬಿ.ವೈ. ರಾಘವೇಂದ್ರ ಸಂಚರಿಸುತ್ತಿದ್ದ ಕಾರು ಅಪಘಾತ

ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣದವರೆಗೂ ಪ್ರಯಾಣ ಬೆಳೆಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>