RIPPONPETE ; ಈ ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಸುಮಾರು 5 ಕೋಟಿ ರೂ. ಮತ್ತು ಈಗಿನ ಸರ್ಕಾರದ ಅನುದಾನ ಹಾಗೂ ಸಮಾಜದವರಿಂದ ಸಂಗ್ರಹಿಸಲಾದ ಹಣದಿಂದ ನಿರ್ಮಿಸಲಾಗುತ್ತಿರುವ ಶಿವಮಂದಿರ ನೂತನ ಕಟ್ಟಡದ ಕಾಮಗಾರಿ ಪೂರ್ಣ ಹಂತದಲ್ಲಿದ್ದು ಈ ಕಟ್ಟಡ ಕಾಮಗಾರಿಯನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರದ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿರುವ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮದುವೆ ಶುಭ ಕಾರ್ಯಗಳಿಗೆ ಉಪಯುಕ್ತವಾಗಲೆಂದು ಸಮಾಜ ಬಾಂಧವರಲ್ಲಿ ಚರ್ಚಿಸಿ ಲೋಕಾರ್ಪಣೆ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶ್ರೀಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷ ದುಂಡರಾಜಪ್ಪಗೌಡ, ಎಂ.ಆರ್.ಶಾಂತವೀರಪ್ಪಗೌಡ, ಹೆಚ್.ಎಂ.ವರ್ತೇಶಪ್ಪ ಹುಗುಡಿ, ಡಿ.ಎಸ್.ರಾಜಾಶಂಕರ, ಬೆಳಂದೂರು ಬಿ.ವಿ.ನಾಗಭೂಷಣ (ಸ್ವಾಮಿಗೌಡ), ಹೆಚ್.ವಿ.ಈಶ್ವರಪ್ಪಗೌಡ, ಅಖಿಲ ಭಾರತ ವೀರಶೈವ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಉಮೇಶ್, ಡಿ.ಈ ಮಧುಸೂದನ್, ನೆವಟೂರು ಸ್ವಾಮಿಗೌಡ, ಲಿಂಗಪ್ಪಗೌಡ ಬೆನವಳ್ಳಿ, ಹೆಚ್.ಎಸ್.ರವಿ ಬಾಳೂರು, ಬಸವೇಶ್ವರ ವೀರಶೈವ ಸಮಾಜದ ಪದಾಧಿಕಾರಿಗಳು ಸಮಾಜ ಬಾಂಧವರು ಇದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.