ತೀರ್ಥಹಳ್ಳಿ : ಮುಂಡಗಾರು ಲತಾ ಮತ್ತು ವನಜಾಕ್ಷಿ ಮೂರು ದಿನ ಪೊಲೀಸ್ ಕಸ್ಟಡಿಗೆ

Written by Mahesha Hindlemane

Published on:

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಬ್ಬರನ್ನು ತೀರ್ಥಹಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿತ್ತು. ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಕಾರಣದಿಂದ ತೀರ್ಥಹಳ್ಳಿ ಕೋರ್ಟ್‌ಗೆ ಸೋಮವಾರ ಹಾಜರುಪಡಿಸಲಾಗಿತ್ತು.

ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೀತಾಮಣಿಯವರು ವಿಚಾರಣೆ ನಡೆಸಿ ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರಿಗೆ ಸಹಕರಿಸುವಂತೆ ಆದೇಶ ನೀಡಿದ್ದಾರೆ.

Leave a Comment