ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್ಗೆ ಹಾಜರುಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್ಗೂ ಹಾಜರುಪಡಿಸಿದ ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು, ಕರೆತರುತ್ತಿರುವ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.
ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು(12/9, 51/09 ಹಾಗೂ 03/12) ಕೇಸ್ ದಾಖಲಾಗಿವೆ. ಅದೇ ರೀತಿ ವನಜಾಕ್ಷಿ ವಿರುದ್ಧ ಸಹ ಕೇಸ್ ದಾಖಲಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?