ಭದ್ರಾವತಿ

ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಭದ್ರಾವತಿ ; ಕ್ರಿಕೆಟ್ ಆಟದ ವಿಚಾರದಲ್ಲಿ ನಡೆದಿದ್ದ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅರುಣ್ (22) ಎನ್ನುವ ಯುವಕನನ್ನು ಐದು ಜನರ ಯುವಕರ ತಂಡ ಕೊಲೆ ಮಾಡಿತ್ತು. ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

ಅರುಣ್ ಕೊಲೆಯ ಪ್ರಮುಖ ಆರೋಪಿ ಅರುಣ್ ಕುಮಾರ್ ಕಾಲಿಗೆ ಮಂಗಳವಾರ ಗುಂಡೇಟು ಬಿದ್ದಿದೆ. ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿ ಅರುಣ್ ಕುಮಾರ್ ಗೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಫೈರ್ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆರೋಪಿ ಅರುಣ್ ಕುಮಾರ್ ಮೇಲೆ ಐದು ಪ್ರಕರಣಗಳು ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]