ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ವಾಕಿಂಗ್ ಹೋಗುತ್ತಿದ್ದ ಅಡಿಕೆ ವ್ಯಾಪಾರಿ ಹೇಮಣ್ಣ (68) ಎಂಬ ವ್ಯಕ್ತಿಯನ್ನು ಚೂರಿಯಿಂದ ಇರಿದು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ತಂಜಿಮ್ ಎಂಬ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಭಾಗಿಯಾಗಿದ್ದ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ಮಂಜುನಾಥ್ ಯಾನೆ ಚಳಿ ಮಂಜ ಎಂಬ ಆರೋಪಿಯ ಇರುವಿಕೆಯನ್ನು ತಿಳಿದುಕೊಂಡ ಪೊಲೀಸರು ಆತನನ್ನು ಬಂಧಿಸಲು ಯತ್ನಿಸಿದ್ದಾರೆ. ಆಗ ಆತ ಪೊಲೀಸ್ ಸಿಬ್ಬಂದಿ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿ ಸೆರೆಹಿಡಿದು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]