ಶಿವಮೊಗ್ಗ – ಹಾಸನ ಮತ್ತು ಕೋರವಂಗಲ ನಡುವೆ ನಡೆಯುವ ಸುರಕ್ಷತಾ ಹಾಗೂ ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಆಗಸ್ಟ್ 18, 19, 21, 22, 23, 25, 26, 28 ಮತ್ತು 29, 2025 ರಂದು ರೈಲು ಸಂಖ್ಯೆ 16222 ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ ಮಾರ್ಗದಲ್ಲಿ 30 ನಿಮಿಷಗಳ ಕಾಲ ಸಂಚಾರ ನಿಯಂತ್ರಣ ಜಾರಿಯಾಗಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ತಾಳಗುಪ್ಪ–ಯಶವಂತಪುರ ವಿಶೇಷ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ
ಪ್ರಯಾಣಿಕರ ಸೌಕರ್ಯಕ್ಕಾಗಿ, ನೈಋತ್ಯ ರೈಲ್ವೆ ರೈಲು ಸಂಖ್ಯೆ 06544 ತಾಳಗುಪ್ಪ–ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲಿನ ಹೊರಡುವ ವೇಳೆಯನ್ನು 14 ಆಗಸ್ಟ್ 2025 ರಂದು ಪರಿಷ್ಕರಿಸಿದೆ.
ಹಿಂದಿನ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 8:15ಕ್ಕೆ ತಾಳಗುಪ್ಪದಿಂದ ಹೊರಡಬೇಕಿದ್ದ ರೈಲು, ಈಗ ಬೆಳಿಗ್ಗೆ 10:00 ಗಂಟೆಗೆ ಹೊರಡಲಿದೆ. ಪರಿಷ್ಕೃತ ಆಗಮನ/ನಿರ್ಗಮನ ಸಮಯಗಳು ಈ ಕೆಳಗಿನಂತಿವೆ –
- ಸಾಗರ ಜಂಬಗಾರು: 10:16 / 10:18
- ಆನಂದಪುರಂ: 10:48 / 10:50
- ಶಿವಮೊಗ್ಗ ಟೌನ್: 11:55 / 12:00
- ಭದ್ರಾವತಿ: 12:20 / 12:22
- ತರಿಕೆರೆ: 12:38 / 12:40
- ಬೀರೂರು: 13:10 / 13:12
- ಅರಸೀಕೆರೆ: 14:00 / 14:05
- ತಿಪಟೂರು: 14:25 / 14:27
- ತುಮಕೂರು: 15:43 / 15:45
- ಯಶವಂತಪುರ: 17:15ಕ್ಕೆ ತಲುಪುತ್ತದೆ.
ರೈಲ್ವೆ ಇಲಾಖೆ, ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಗಳನ್ನು ಪರಿಷ್ಕೃತ ವೇಳಾಪಟ್ಟಿಗೆ ಅನುಗುಣವಾಗಿ ಮಾಡಿಕೊಂಡುಕೊಳ್ಳುವಂತೆ ವಿನಂತಿಸಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650