ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು.
ಇಂದು ಬೆಳಗ್ಗೆ 6 ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಭಟ್ ಮತ್ತು ಕಿರಣ್ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಅಲಂಕಾರ ಪೂಜೆ ಜರುಗಿತು.

ಶ್ರೀ ನಾಗೇಂದ್ರ ಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನಾಶೀರ್ವಾದ ಪಡೆದರು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಮತ್ತು ಹೆಚ್.ಎಂ.ವರ್ತೇಶ್ಗೌಡ ಸೇರಿದಂತೆ ಸಮಿತಿಯ ಸದಸ್ಯರು ಶಾಸಕ ಗೋಪಾಲಕೃಷ್ಣ ಬೇಳೂರನ್ನು ಸನ್ಮಾನಿಸಿ ಗೌರವಿಸಿ ಸತ್ಕರಿಸಿದರು. ನಂತರ ಸಾಮೂಹಿಕ ಅನ್ನಸಂತರ್ಪಣೆ ಸಹ ಜರುಗಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





