Ripponpete

ವಿಜೃಂಭಣೆಯೊಂದಿಗೆ ಜರುಗಿದ ನಾಗರಹಳ್ಳಿ ಕೂಳೆ ಪಂಚಮಿ ಜಾತ್ರೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಂದು ಬೆಳಗ್ಗೆ 6 ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಅಲಂಕಾರ ಪೂಜೆ ಜರುಗಿತು.

ಶ್ರೀ ನಾಗೇಂದ್ರ ಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನಾಶೀರ್ವಾದ ಪಡೆದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಮತ್ತು ಹೆಚ್.ಎಂ.ವರ್ತೇಶ್‌ಗೌಡ ಸೇರಿದಂತೆ ಸಮಿತಿಯ ಸದಸ್ಯರು ಶಾಸಕ ಗೋಪಾಲಕೃಷ್ಣ ಬೇಳೂರನ್ನು ಸನ್ಮಾನಿಸಿ ಗೌರವಿಸಿ ಸತ್ಕರಿಸಿದರು. ನಂತರ ಸಾಮೂಹಿಕ ಅನ್ನಸಂತರ್ಪಣೆ ಸಹ ಜರುಗಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>