ರಿಪ್ಪನ್ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಇಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವಗಿವು ಶ್ರದ್ದಾಭಕ್ತಿಯಿಂದ ಜರುಗಿತು.
ವರ್ಷದಲ್ಲಿ ಎರಡು ಬಾರಿ ಬರುವ ನಾಗರ ಪಂಚಮಿಯಂದು ಈ ಜಾತ್ರಾ ಮಹೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಶ್ರೀನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ, ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು.
ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಭಕ್ತರು ಸರತಿ ಸಾಲಿನಲ್ಲಿ ನಿಂತು ನಾಗೇಂದ್ರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಹರಕೆ ಕಾಣಿಕೆ, ಹಣ್ಣು-ಕಾಯಿ ಸಮರ್ಪಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಹಾಗೂ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

