ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶಗೌಡ ನಿಧನ !

Written by Mahesh Hindlemane

Published on:

HOSANAGARA ; ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಅಡಿಕೆ ಕೊಯ್ಲಿನ ಸಂದರ್ಭವಾದ್ದರಿಂದ ಕೊಯ್ಲುಕತ್ತಿ ರಿಪೇರಿ ಮಾಡಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮಹೇಶಗೌಡ ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು-ಬಳಗದವರು ಸ್ನೇಹಿತ ವರ್ಗದವರನ್ನು ಅಗಲಿದ್ದಾರೆ.

Leave a Comment