ಶಿವಮೊಗ್ಗ ಜಿಲ್ಲೆಯ ಗಾಜನೂರುದಲ್ಲಿರುವ ಜವಾಹರ ನವೋದಯ ವಿದ್ಯಾಲಯವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಆರನೇ ತರಗತಿಗೆ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಜವಾಹರ ನವೋದಯ ವಿದ್ಯಾಲಯವು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅನುಬಂಧಿತ ಶಾಲೆಯಾಗಿದ್ದು, ಇದರಲ್ಲಿ ಉಚಿತ ಶಿಕ್ಷಣ, ವಸತಿ, ಆಹಾರ ಮತ್ತು ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತದೆ.ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶವನ್ನು ಈ ಶಾಲೆ ಹೊಂದಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 29, 2025
ಆಸಕ್ತ ಪೋಷಕರು ಹಾಗೂ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್ಸೈಟ್ https://navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಪೂರಕ ದಾಖಲೆಗಳು, ವಿದ್ಯಾರ್ಥಿಯ ಗುರುತಿನ ಮಾಹಿತಿ ಮತ್ತು ಪೋಷಕರ ವಿವರಗಳನ್ನು ಸೇರಿಸಬೇಕಾಗುತ್ತದೆ.
ಪ್ರವೇಶ ಪರೀಕ್ಷೆ ಬಗ್ಗೆ ಮಾಹಿತಿ:
ಆರನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ನವೋದಯ ಸಮಿತಿ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಬುದ್ಧಿಮತ್ತೆ, ಗಣಿತ ಹಾಗೂ ಭಾಷಾ ಸಾಮರ್ಥ್ಯವನ್ನು ಪರಿಶೀಲಿಸಲಾಗುತ್ತದೆ. ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು.
ಪ್ರಾಚಾರ್ಯರ ಪ್ರಕಟಣೆಯ ಪ್ರಕಾರ, ಗ್ರಾಮೀಣ ಹಾಗೂ ಶೈಕ್ಷಣಿಕವಾಗಿ ಹಿಂದೆ ಇರುವ ಕುಟುಂಬಗಳಿಂದ ಬರುವ ಮಕ್ಕಳಿಗೆ ಈ ಶಾಲೆಯಲ್ಲಿ ಬಹುಮಟ್ಟಿಗೆ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ಈ ಉತ್ತಮ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು ಭೇಟಿ ನೀಡಿ:
🌐 https://navodaya.gov.in
Read More :ಸರ್ಕಾರದಿಂದ ಟ್ರ್ಯಾಕ್ಟರ್, ಬೆಳೆ ವಿಸ್ತರಣೆಗೂ ಹಣ! ರೈತರಿಗೆ ಬಂಪರ್ ಸಬ್ಸಿಡಿ ಅವಕಾಶ!

