Ripponpete

ಅಧಿಕಾರಿಗಳ ನಿರ್ಲಕ್ಷ್ಯ, ಪಡಿತರಕ್ಕಾಗಿ ಪರದಾಟ !

RIPPONPETE ; ನವೆಂಬರ್ ತಿಂಗಳ ಅನ್ನ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರದಾರರಿಗೆ ಇಲ್ಲಿನ ಮೂರು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಇಲ್ಲದೆ  ಅಲೆದಾಡುವಂತಾಗಿದೆ ಎಂದು  ಫಲಾನುಭವಿಗಳಾದ ನಿರ್ಮಲ, ರಂಜಿನಿ, ಇಂದಿರಾ, ಪ್ರತಾಪ,  ಈಶ್ವರಶೆಟ್ಟಿ, ರಾಘವೇಂದ, ಜಯಮ್ಮ, ಶಿವಪ್ಪ ಕೊಳವಳ್ಳಿ, ಮೋಹನ ಆರೋಪಿಸಿದರು.

WhatsApp Group Join Now
Telegram Group Join Now
Instagram Group Join Now

ಕೊರೊನಾ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರ ಪಡಿತರದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್ ನೀಡಿದರೆ ಪಡಿತರ ವಿತರಣೆ ಮಾಡಬೇಕು ಎಂಬ ನಿಯಮವನ್ನು ಜಾರಿಗೊಳಿಸಲಾಗಿದ್ದರೂ ಇಲ್ಲಿಯವರೆಗೆ ಸರ್ಕಾರದ ನಿಯಮದಂತೆ ನ್ಯಾಯಬೆಲೆ ಅಂಗಡಿಯವರು ಹೆಚ್ಚುವರಿ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಿಸುತ್ತಿದ್ದರು. ಆದರೆ ಈ ಬಾರಿ ಇಲ್ಲಿ ಮೂರು ನ್ಯಾಯಬೆಲೆ ಅಂಗಡಿಗಳಿದ್ದರು ಕೂಡಾ ಅಕ್ಕಿ ಇಲ್ಲದೆ ಫಲಾನುಭವಿಗಳು ಪರದಾಡುವಂತಾಗಿದೆ ಎಂದು ಮಾಧ್ಯಮವದರಲ್ಲಿ ತಮ್ಮ ನೋವಿನ ಕಥೆಯನ್ನು ಹಂಚಿಕೊಂಡರು.

ಬರುವೆ ವಿವಿಧೋದ್ದೇಶ ಮಹಿಳಾ ಸಂಘದಲ್ಲಿ ಹೋದರೆ ಅಕ್ಕಿ ಇಲ್ಲ ಎನ್ನುತ್ತಾರೆ. ಅಲ್ಲಿಂದ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಹೋದರೆ ಅಲ್ಲಿಯೂ ಅದೇ ಕಥೆ, ಇನ್ನೂ  ಜಂಬಳ್ಳಿ ನ್ಯಾಯಬೆಲೆ ಅಂಗಡಿಗೆ ಹೋಗಿ ಕೇಳಿದರೆ ನಮ್ಮ ಪಡಿತರ ಕಾರ್ಡ್‌ದಾರಿಗೆ ಕೊಡಲು ಅಕ್ಕಿ ಇಲ್ಲ ಎಲ್ಲಿಂದ ತಂದು ಕೊಡುವುದು ಎಂದು ಅಂಗಡಿಯವರು ಗೊಣಗುತ್ತಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆಹಾರ ಇಲಾಖೆಯ ಅಧಿಕಾರಿಗಳನ್ನು ದೂವಾಣಿ ಮೂಲಕ ಸಂಪರ್ಕಿಸಿದರೆ ಸರಿಯಾದ ಮಾಹಿತಿಯನ್ನು ನೀಡದೆ ಜಾಣತನದ ಉತ್ತರ ನೀಡಿ ಹೆಚ್ಚುವರಿ ಅಕ್ಕಿ ನೀಡದಂತೆ ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕರು ಅದೇಶವಿದೆ ಎಂದು ಹೇಳಿ ಜಾರಿಕೊಳ್ಳುತ್ತಾರೆ. ಇನ್ನಾದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಪಡಿತರದಾರ ಸಮಸ್ಯೆಗೆ ಪರಿಹಾರ ಕಲ್ಪಿಸುವರೇ ಕಾದುನೋಡಬೇಕಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]