Chikmagaluru News

ಹಸೆಮಣೆ ಏರಿ ಕೇವಲ 33 ದಿನಕ್ಕೆ ನೇಣಿಗೆ ಕೊರಳೊಡ್ಡಿದ ನವವಿವಾಹಿತೆ !

THARIKERE ; ಹಸೆಮಣೆ ಏರಿ ಕೇವಲ 33 ದಿನಕ್ಕೆ ನವವಧು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಬಿಂದು (21) ಹೊಟ್ಟೆ ನೋವು ತಾಳಲಾರದೆ ಮನೆಯಲ್ಲೇ ನೇಣುಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಮಹಿಳೆ.

ಮೃತ ಬಿಂದು ಕಳೆದ ನವೆಂಬರ್ 24ರಂದು ಮದುವೆಯಾಗಿದ್ದಳು. ಮದುವೆಯಾಗಿ ಕೇವಲ ಒಂದು ತಿಂಗಳು ಮೂರು ದಿನವಾಗಿದೆ ಅಷ್ಟೆ. ಮೂಲತಃ ತರೀಕೆರೆ ತಾಲೂಕಿನ ಗುಳ್ಳದಮನೆ ನಿವಾಸಿ ಬಿಂದುಳನ್ನ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಂತೇನಹಳ್ಳಿ ಮೂಲಕ ಪ್ರಸನ್ನಕುಮಾರ್ ಎಂಬುವರಿಗೆ ಮದುವೆ ಮಾಡಲಾಗಿತ್ತು.

ಮೃತ ಬಿಂದು ಮದುವೆಯನ್ನೂ ಖುಷಿಯಿಂದಲೇ ಆಗಿದ್ದಳು. ಕಳೆದ ಮೂರು ದಿನದ ಹಿಂದೆ ಗಂಡನ ಜೊತೆ ತವರು ಮನೆಗೆ ಬಂದಿದ್ದಳು. ಮೂರು ದಿನದಿಂದ ದೇವಸ್ಥಾನಗಳಿಗೆ ಹೋಗುತ್ತಿದ್ದ ದಂಪತಿಗಳು ಮನೆಯಲ್ಲಿನ ಪೂಜೆಯಲ್ಲೂ ಪಾಲ್ಗೊಂಡಿದ್ದರು. ಶುಕ್ರವಾರ ತೀವ್ರ ಹೊಟ್ಟೆನೋವು ತಾಳಲಾರದೆ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೃತ ಬಿಂದುವಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹೊಟ್ಟೆನೋವು ಇತ್ತು. ಅದು ಪಿರಿಯಡ್ಸ್ ಟೈಂನಲ್ಲಿ ತೀವ್ರ ಹೆಚ್ಚಾಗುತ್ತಿತ್ತು. ಈ ಬಗ್ಗೆ ಕುಟುಂಬಸ್ಥರು ಆಸ್ಪತ್ರೆಗೂ ತೋರಿಸಿದ್ದರು. ಆದರೆ, ನೋವು ಕಡಿಮೆಯಾಗಿರಲಿಲ್ಲ. ಹೊಟ್ಟೆನೋವು ಹೆಚ್ಚಿದ್ದ ಕಾರಣ ತಾಳಲಾರದೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಬಿಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ತರೀಕೆರೆ ತಹಶೀಲ್ದಾರ್ ಭೇಟಿ ನೀಡಿ ಶವಪರೀಕ್ಷೆ ನಡೆಸಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]