ಎಂ ಗುಡ್ಡೆಕೊಪ್ಪ ಗ್ರಾ.ಪಂ. ಕಳೂರು ಕ್ಷೇತ್ರದ ಉಪಚುನಾವಣೆ ; ನೂತನ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಆಯ್ಕೆ

Written by Mahesh Hindlemane

Published on:

HOSANAGARA ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಕ್ಷೇತ್ರದ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಚೀಟಿ ಎತ್ತುವ ಮೂಲಕ ನೂತನ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಸದಸ್ಯೆಯಾಗಿ ಕಳೂರು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಶ್ಮಿ ಗೆಲುವು ಸಾಧಿಸಿದ್ದು ಅವರು ಆಶಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರಣ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ನ. 23ರಂದು ಚುನಾವಣೆ ನಡೆಯಬೇಕಾಗಿದ್ದು ಆದರೆ ನಾಮಪತ್ರ ಹಿಂಪಡೆಯುವ ದಿನವಾದ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ರಾಮು ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ನಿರ್ಮಲ ರಾಘವೇಂದ್ರ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರ ಹೊಂದಾಣಿಕೆಯಿಂದ ಇನ್ನೂ 10 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬರಲಿದೆ. 10 ತಿಂಗಳಿಗಾಗಿ ಚುನಾವಣೆ ನಡೆಸುವುದು ಬೇಡ ಎಂದು ತೀರ್ಮಾನಿಸಿ ಇಬ್ಬರು ಅಭ್ಯರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಚೀಟಿ ಎತ್ತುವ ಮೂಲಕ ಬಿಜೆಪಿ ಅಭ್ಯರ್ಥಿ ನಿರ್ಮಲ ರಾಘವೇಂದ್ರ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ಕಾಂಗ್ರೆಸ್ ಹಾಗೂ ಬಿಜೆಪಿಯ ಬೆಂಬಲಿತ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment