RIPPONPETE ; ಶಾಸಕ ಬೇಳೂರು ಗೋಪಾಲಕೃಷ್ಣರವರ ವಿಶೇಷ ಆಸಕ್ತಿಯಿಂದಾಗಿ ಸರ್ಕಾರದಿಂದ ಸುಮಾರು 4.85 ಕೋಟಿ ರೂ. ವೆಚ್ಚದಲ್ಲಿ ಸಾಗರ-ತೀರ್ಥಹಳ್ಳಿ ಸಂಪರ್ಕದ ತಲಾ ಒಂದು ಕಿ.ಮೀ. ರಾಜ್ಯ ಹೆದ್ದಾರಿಯ ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ನಿಂದ ವಿನಾಯಕ ವೃತ್ತದ ಮೂಲಕ ತೀರ್ಥಹಳ್ಳಿ ರಸ್ತೆಯ ಗುಡ್ಶಫರ್ಡ್ ಚರ್ಚ್ವರೆಗೆ ದ್ವಿಪಥ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಮಳೆಗಾಲದ ಕಾರಣ ಅರ್ಧಕ್ಕೆ ಕಾಮಗಾರಿ ನಿಲುವಂತಾಗಿ ಈಗ ಪುನಃ ಚಾಲನೆ ನೀಡುವುದರೊಂದಿಗೆ ಇನ್ನೂ ಹೆಚ್ಚುವರಿಯಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ಕಾಮಗಾರಿಗೆ ಚುರುಕು ಮುಟ್ಟಿಸಿಸುವ ಮೂಲಕ ತೀರ್ಥಹಳ್ಳಿ ರಸ್ತೆಯ ವಿನಾಯಕ ವೃತ್ತದ ಮಾರ್ಗದಲ್ಲಿ ಹಾದು ಹೋಗುವ 11 ಕೆ.ವಿ. ವಿದ್ಯುತ್ ಕಂಬಗಳನ್ನು ಕೂಡಲೇ ಸ್ಥಳಾಂತರಗೊಳಿಸುವ ನಿಟ್ಟಿನಲ್ಲಿ ರಸ್ತೆಯಂಚಿನಲ್ಲಿರುವ ಅಂಗಡಿ ಮಳಿಗೆದಾರರಿಗೆ ಧ್ವನಿವರ್ಧಕದ ಮೂಲಕ ವಾರದೊಳಗೆ ತೆರವುಗೊಳಿಸುವಂತೆ ಮೆಸ್ಕಾಂ ಇಲಾಖೆ ಸೂಚನೆ ನೀಡಿದೆ.
ಒಂದು ವಾರದೊಳಗೆ ತಾವು ಅಂಗಡಿ ಮಳಿಗೆಯನ್ನು ತೆರವುಗೊಳಿಸಿ ಕಾಮಗಾರಿಗೆ ಮುಕ್ತ ಅವಕಾಶವನ್ನು ಮಾಡಿಕೊಡುವಂತೆ ಮನವಿ ಮಾಡಲಾಗಿದ್ದು ಅದನ್ನು ಮೀರಿ ಮುಂದುವರಿದರೆ ಇಲಾಖೆಯವರೇ ತೆರವು ಕಾರ್ಯಾಚರಣೆಗೆ ಇಳಿಯಬೇಕಾಗುವುದೆಂದು ಸಹ ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆಯಾಗಿ ದೀಪಾವಳಿ ಹಬ್ಬದಲ್ಲಿ ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಅದ್ದೂರಿಯಾಗಿ ಹಬ್ಬವನ್ನು ಆಚರಿಸುವ ಕನಸು ಕಾಣುತ್ತಿದ್ದವರಿಗೆ ಕರಾಳ ದೀಪಾವಳಿ ಹಬ್ಬ ಆಚರಿಸಬೇಕಾದ ಅನಿರ್ವಾಯತೆ ಎದುರಾಗಿದೆ.

ಸ್ಥಳಿಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿನಾಯಕ ವೃತ್ತದಲ್ಲಿ ತೀರ್ಥಹಳ್ಳಿ ಮಾರ್ಗದಲ್ಲಿ ಬಸ್ ನಿಲ್ದಾಣದ ಹೊಂದಿಕೊಂಡಂತೆ ಆಟೋ ಸ್ಟ್ಯಾಂಡ್ ಹೊಂಡ ಗುಂಡಿಯ ರಸ್ತೆ ಮಳೆಬಂತು ಎಂದರೆ ರಸ್ತೆಯ ಕೊಳಚೆ ನೀರು ವಾಹನಗಳ ದಟ್ಟಣೆಯಿಂದಾಗಿ ಪ್ರಯಾಣಿಕರಿಗೆ ಸಿಡಿದು ಸ್ನಾನ ಮಾಡಿಸುತ್ತದೆ. ಇದರಿಂದಾಗಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಮತ್ತು ಕರ್ತವ್ಯಕ್ಕೆ ತೆರಳುವ ನೌಕರವರ್ಗ ಹೀಗೆ ದೂರದೂರಿನಿಂದ ಬರುವ ಪ್ರವಾಸಿಗರು ಕೊಳಚೆ ನೀರಿನ ಮಜ್ಜನ ಮಾಡುವ ಸ್ಥಿತಿ ಎದುರಿಸಬೇಕಾಗಿದೆ.
ಇನ್ನಾದರೂ ಲೋಕೋಪಯೋಗಿ ಇಲಾಖೆಯವರು ಮತ್ತು ಮೆಸ್ಕಾಂ ಇಲಾಖೆಯವರ ದೃಢ ನಿರ್ಧಾರದಿಂದಾಗಿ ತೀರ್ಥಹಳ್ಳಿ ರಸ್ತೆ ಅಗಲೀಕರಣ ಮತ್ತು ವಿದ್ಯುತ್ ಕಂಬಗಳ ಸ್ಥಳಾಂತರದ ಕಾಮಗಾರಿಗೆ ಚುರುಕು ಮುಟ್ಟಿಸಿದಂತಾಗುವುದೇ ಕಾದು ನೋಡಬೇಕಾಗಿದೆ. ಈಗಾಗಲೇ ಸಾಗರ ರಸ್ತೆಯಲ್ಲಿ ಖಾಸಗಿ ಅಂಗಡಿ ಮಾಲೀಕರೊಬ್ಬರು ರಸ್ತೆ ಅಭಿವೃದ್ದಿ ಕಾಮಗಾರಿಗೆ ತಡೆಯೊಡ್ಡಿ ನ್ಯಾಯಾಲಯದ ತಡೆಯಾಜ್ಞೆ ಆದೇಶ ತಂದಿದ್ದು ಇದರಿಂದಾಗಿ ದ್ವಿಪಥ ರಸ್ತೆ ಕಾಮಗಾರಿಗೆ ಹಿನ್ನಡೆಯಾಗಿದೆ ಎಂದು ಗ್ರಾಮಸ್ಥರು ಮಾಧ್ಯಮದವರಲ್ಲಿ ಹಂಚಿಕೊಂಡರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು