HOSANAGARA ; ತಾಲ್ಲೂಕಿನ ಬಟ್ಟೆಮಲ್ಲಪ್ಪ ಆಲಗೇರಿಮಂಡ್ರಿ ಗ್ರಾಮಗಳಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ಪೊಲೀಸರು ಮಂಜುನಾಥ ಎಂಬುವನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಇಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಶಂಕರಗೌಡ ಪಾಟೀಲ್ರವರ ಆದೇಶದ ಮೇರೆಗೆ ಸಿಬ್ಬಂದಿಯಾದ ಮಾಯಪ್ಪರವರು ಬಟ್ಟೆಮಲ್ಲಪ್ಪದ ಆನಂದಪುರ ರಸ್ತೆಯಲ್ಲಿರುವ ಅಂಗಡಿಯ ಮುಂಭಾಗ ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು ಬರೆದುಕೊಡುತ್ತಿದ್ದ ಮಂಜುನಾಥ ಎಂಬುವವರು ಓ.ಸಿ ಬರೆದುಕೊಳ್ಳುತ್ತಿದ್ದು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಈತನನ್ನು ವಶಕ್ಕೆ ಪಡೆದು ಅವನ ಕೈಯಲ್ಲಿದ್ದ 1450 ರೂಪಾಯಿ ನಗದು ಓ.ಸಿ ಸಂಖ್ಯೆ ಬರೆದ ಚೀಟಿ ಮತ್ತು ಒಂದು ಪೆನ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.