ಶಿವಮೊಗ್ಗ ಸುದ್ದಿ

ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮ್ನಿ ವಾಹನ !

SHIVAMOGGA ; ಪೆಟ್ರೋಲ್ ಹಾಕುವಾಗ ಓಮ್ನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ಇಂದು ನಡೆದಿದ್ದು 5 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ ಓಮ್ನಿ ಕಾರು ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ಹೊತ್ತಿ ಉರಿದಿದೆ.

ಓಮ್ನಿ ಮಂಗಳೂರು ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ತೀರ್ಥಹಳ್ಳಿ ರಸ್ತೆಯಲ್ಲಿ ಪೆಟ್ರೋಲ್ ಖಾಲಿಯಾಗಿತ್ತು ಎಂದು ಭರ್ತಿ ಮಾಡುತ್ತಿದ್ದ ವೇಳೆ ಹೊತ್ತಿ ಉರಿದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಓಮ್ನಿಯಲ್ಲಿದ್ದ 5 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲೇ ವಾಹನ ಹೊತ್ತಿ ಉರಿದ ಹಿನ್ನಲೆ ಓರ್ವರಿಗೆ ಸಣ್ಣ-ಪುಟ್ಟ ಗಾಯವಾಗಿದೆ.

ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]