Ripponpete

ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಸಾವು !

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕರಕುಚ್ಚಿ ನಿವಾಸಿ ಮರ ಕಟಾವು ಮಾಡುವ ಕೂಲಿ ಕಾರ್ಮಿಕ ರಾಜು (42) ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ ಅದೇ ಬೈಕಿನಲ್ಲಿದ್ದ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ನಿವಾಸಿ ಶ್ರೀನಿವಾಸ (30) ಈತನಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಇವರು ಹುಂಚ ಸಮೀಪದ ಆನೆಗದ್ದೆ ಬಳಿ ಮರ ಕಟಾವು ಮಾಡಲು ಬಂದಿದ್ದ ಕಾರ್ಮಿಕರು. ಕೆಲಸದ ನಿಮಿತ್ತ ಚಿಕ್ಕಜೇನಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ರಿಪ್ಪನ್‌ಪೇಟೆಯಿಂದ ಕೋಡೂರಿಗೆ ಬರುತ್ತಿದ್ದ ಮತ್ತೊಂದು ಬೈಕಿನಲ್ಲಿದ್ದ ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿಗಳಾದ ಚರಣ್ (25) ಹಾಗೂ ಪ್ರೀತಮ್ (15) ಇವರಿಗೂ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಹಾಗೂ ಮಂಗಳೂರು ಆಸ್ಪತ್ರೆಗೆ
ಕರೆದೊಯ್ಯಲಾಗಿದೆ.

ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>