ಹೊಸನಗರ

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಸೋಮವಾರ ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಉದ್ಯೋಗ ಕೈಗೊಳ್ಳಲು ಸರಕಾರ ಮಹಿಳೆಯರಿಗಾಗಿಯೇ ವಿಶೇಷ ಯೋಜನೆಗಳನ್ನು ರೂಪಿಸಿದೆ. ಅಕ್ಕ ಯೋಜನೆಯಡಿ ಮಹಿಳಾ ಸಂಘಗಳನ್ನು ರಚಿಸಲು ನೂತನ ಕಾರ್ಯಕ್ರಮ ಜಾರಿಗೊಂಡಿದೆ. ಕಡಿಮೆ ದರದ ಬಡ್ಡಿಯಲ್ಲಿ ಸಾಲ ಸೌಲಭ್ಯ ಲಭ್ಯವಿದೆ. ಈಗಾಗಲೇ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕತೆ ಸುಧಾರಿಸಲು ಕಾರಣವಾಗಿವೆ. ಮಹಿಳಾ ಸಂಘಟನೆಗಳು ಸದೃಢವಾಗಿದ್ದಲ್ಲಿ ಸರಕಾರದ ಯೋಜನೆಗಳು ಮಹಿಳಾ ಫಲಾನುಭವಿಗಳನ್ನು ತಲುಪಲು ಇನ್ನಷ್ಟು ಸಹಕಾರಿಯಾಗುತ್ತವೆ ಎಂದರು.

ಸಂಸ್ಥೆಯ ನಿರ್ದೇಶಕ ಫಾ.ಪಿಯುಸ್‌ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಅಡಿಯಲ್ಲಿ 1800 ಸಂಘಗಳು ಕಾರ್ಯನಿರ್ವಹಿಸುತ್ತಿವೆ. 2300 ವಿದ್ಯಾರ್ಥಿಗಳಿಗೆ ಆರ್ಥಿಕ ಸಹಕಾರಿ ಕಲ್ಪಿಸಿದೆ. ನೊಂದ ಮಹಿಳೆಯರಿಗಾಗಿ ಸಹಾಯ ಹಸ್ತ ಚಾಚಿವೆ ಯಾವುದೇ ಮಹಿಳೆಯರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯದಲ್ಲಿ ನಮ್ಮ ಈ ಸಂಸ್ಥೆ ಅವರ ನೆರವಿಗೆ ಬರಲಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೇದಿನಿ ಕೆಸವಿನಮನೆ ವಿಶೇಷ ಉಪನ್ಯಾಸ ನೀಡಿದರು.

ಪೂರ್ಣಿಮಾ ಮೂರ್ತಿರಾವ್, ಶಶಿಕಲಾ ಹರೀಶ್, ಮೀನಾಕ್ಷಿ, ನಾಗಮಣಿ, ಕೆ.ಎಸ್.ಹೇಮಾ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಹಾಗೂ ಮಧುಸೂದನ್ ಮತ್ತಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]