ಮೇ 07 ರಂದು ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚಾಚಾರ್ಯರ ಸಮಾವೇಶ ; ರಂಭಾಪುರಿ ಶ್ರೀಗಳು

Written by malnadtimes.com

Published on:

ಬಾಳೆಹೊನ್ನೂರು ; ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಮೇ 07ರ ಸಂಜೆ 7 ಗಂಟೆಗೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚ ಪೀಠಾಧೀಶರ ಸಮಾವೇಶ ನಡೆಯಲಿದ್ದು ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶ್ರೀಶೈಲ ಮತ್ತು ಶ್ರೀ ಕಾಶಿ ಜಗದ್ಗುರುಗಳವರಿಗೆ ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರು ಜನಗಣತಿ-ಜಾತಿಗಣತಿ ಸಂದಿಗ್ಧ ಪ್ರಸಂಗದಲ್ಲಿ ಪೀಠಗಳು ಒಕ್ಕೂಟ ವ್ಯವಸ್ಥೆಗೆ ಮುಂದಾಗಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ಮತ್ತು ಪೀಠಾಭಿಮಾನಿಗಳ-ಭಕ್ತರ ಒತ್ತಾಸೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ.

ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.      

Leave a Comment