Chikkamagaluru

ಮೇ 07 ರಂದು ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚಾಚಾರ್ಯರ ಸಮಾವೇಶ ; ರಂಭಾಪುರಿ ಶ್ರೀಗಳು

ಬಾಳೆಹೊನ್ನೂರು ; ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಮೇ 07ರ ಸಂಜೆ 7 ಗಂಟೆಗೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚ ಪೀಠಾಧೀಶರ ಸಮಾವೇಶ ನಡೆಯಲಿದ್ದು ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶ್ರೀಶೈಲ ಮತ್ತು ಶ್ರೀ ಕಾಶಿ ಜಗದ್ಗುರುಗಳವರಿಗೆ ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರು ಜನಗಣತಿ-ಜಾತಿಗಣತಿ ಸಂದಿಗ್ಧ ಪ್ರಸಂಗದಲ್ಲಿ ಪೀಠಗಳು ಒಕ್ಕೂಟ ವ್ಯವಸ್ಥೆಗೆ ಮುಂದಾಗಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ಮತ್ತು ಪೀಠಾಭಿಮಾನಿಗಳ-ಭಕ್ತರ ಒತ್ತಾಸೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ.

ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.      

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>