Ripponpete

ಅರಸಾಳುವಿನಲ್ಲಿ ಮುಂಜಾನೆ ರೈಲು ನಿಲುಗಡೆಗೆ ಪ್ರಯಾಣಿಕರ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ ನಿಲ್ದಾಣದಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ರಾಜಧಾನಿ ಸೇರಿದಂತೆ ಇತರ ಕಡೆಗೆ ಸಂಚರಿಸುವ ಪ್ರಯಾಣಿಕರು ಆಗ್ರಹಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಳಗುಪ್ಪದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ ಇಂಟರ್‌ಸಿಟಿ ರೈಲು ಸಾಗರ-ಆನಂದಪುರ ಮಾರ್ಗವಾಗಿ ಹೋಗುವ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಶಿವಮೊಗ್ಗ, ಭದ್ರಾವತಿ, ತರೀಕೆರೆ, ಬಿರೂರು, ಕಡೂರು ಮಾರ್ಗದ ಬೆಂಗಳೂರು ಹೋಗಲು ಆನಂದಪುರ ರೈಲ್ವೆ ನಿಲ್ದಾಣಕ್ಕೆ ಹೋಗಿ ಪ್ರಯಾಣಿಸುವಂತಾಗಿದೆ ಎಂದು ಪ್ರಯಾಣಿಕರು ತಮ್ಮ ಅಂತರಾಳದ ನೋವಯನ್ನು ಮಾಧ್ಯಮದವರಲ್ಲಿ ಹಂಚಿಕೊಂಡರು.

ಕೋಣಂದೂರು, ಹುಂಚ, ಗುಡ್ಡೆಕೊಪ್ಪ, ಅಮೃತ, ಜಂಬಳ್ಳಿ, ಬಿದರಹಳ್ಳಿ, ಹೆದ್ದಾರಿಪುರ, ಕಲ್ಲೂರು, ತಳಲೆ, ಕಳಸೆ, ಬೆಳ್ಳೂರು, ಹಾರೋಹಿತ್ತಲು, ಬಸವಾಪುರ, ಬೆನವಳ್ಳಿ, ರಿಪ್ಪನ್‌ಪೇಟೆ, ಗವಟೂರು, ಕುಕ್ಕಳಲೇ, ಬಾಳೂರು, ಹಾಲುಗುಡ್ಡೆ ಇನ್ನಿತರ ಗ್ರಾಮಗಳಲ್ಲಿನ ವಿದ್ಯಾವಂತ ನಿರುದ್ಯೋಗಿಗಳು ಮತ್ತು ಅನಾರೋಗ್ಯ ಪೀಡಿತರು, ಮಹಿಳೆಯರು ಸೇರಿದಂತೆ ರಾಜಕೀಯ ಮುಖಂಡರು ರಾಜಧಾನಿ ಬೆಂಗಳೂರಿಗೆ ಹೋಗಿ ಬರಲು ಕೇವಲ ಮೂರರಿಂದ ನಾಲ್ಕು ಕೀ.ಮೀ ದೂರದ ಅರಸಾಳು ನಿಲ್ದಾಣಕ್ಕೆ ಹೋಗಿ ರೈಲು ಹತ್ತುವ ವ್ಯವಸ್ಥೆಯಿದ್ದರೂ ಕೂಡಾ ಮುಂಜಾನೆಯ ಇಂಟರ್‌ಸಿಟಿ ರೈಲು ಹತ್ತಲು ಸುಮಾರು ಹತ್ತು ಹನ್ನೆರಡು ಕಿ.ಮೀ ದೂರದ ಆನಂದಪುರ ಹೋಗಿ ಪ್ರಯಾಣಿಸಬೇಕಾದ ಅನಿರ್ವಾತೆ ಎದುರಾಗಿದೆ ಎಂದು ದೂರಿದರು.

ಇನ್ನಾದರೂ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರರವರು ಇತ್ತ ಗಮನಹರಿಸಿ ಮತದಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವತ್ತಾ ಮುಂದಾಗುವರೆ ಕಾದು ನೋಡಬೇಕಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>