Accident

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ !

KALASA ; ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕಗ್ಗನಾಳ ಬಳಿ ಸಂಭಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಗ್ಗನಾಳ ಬಳಿಯ ಕಿರು ಸೇತುವೆ ಸಮೀಪವೇ ಈ ಅಪಘಾತ ನಡೆದಿದ್ದು ಘಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳಕ್ಕೆ ಬಂದ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ. ಈ ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>