ಹೊಸನಗರ : ತಾಲೂಕಿನ ರಿಪ್ಪನ್ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು.
ಪಿಂಚಣಿ ಅದಾಲತ್ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ, ಮೈತ್ರಿ, ಮನಸ್ವಿನಿ, ಆದರ್ಶ ವಿವಾಹ, ಆಮ್ ಆದ್ಮಿ ಬಿಮಾ ಮತ್ತು ರಾಷ್ಟ್ರೀಯ ಕುಟುಂಬ ಪರಿಹಾರ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಾಡಕಛೇರಿಯ ಆರ್.ಐ. (ರೆವಿನ್ಯೂ ಇನ್ಸ್ಪೆಕ್ಟರ್) ಅಪ್ರೋಜ್, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಇನ್ನಿತರ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.