ಶೃಂಗೇರಿ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಶೃಂಗೇರಿಯ ಕಿರಕೋಡು ಸಮೀಪ ರಾತ್ರಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಶೃಂಗೇರಿ ಪಿಎಸ್ಐ ನೇತೃತ್ವದಲ್ಲಿ ದಾಳಿ ನಡೆಸಿ ಪಿಕ್ಅಪ್ (KA18D1900) ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಅಕ್ರಮ ಮರಳು ಸಾಗಾಟ ಮಾಡುವ ವಾಹನಗಳ ಮುಂಭಾಗ ಮಾತ್ರ ನಂಬರ್ ಪ್ಲೇಟ್ ಹೊಂದಿದ್ದು, ಹಿಂಭಾಗ ನಂಬರ್ ಪ್ಲೇಟ್ ಇಲ್ಲದೆ ಮರಳು ಸಾಗಾಟದ ದಂಧೆಗೆ ಇಳಿಯುತ್ತಿದ್ದಾರೆ.
ಅತ್ಯಂತ ವೇಗವಾಗಿ ವಾಹನವನ್ನು ಚಲಾಯಿಸುವುದರಿಂದ ಕೆಲವು ರಸ್ತೆಗಳಲ್ಲಿ ರಾತ್ರಿ ಸಮಯದ ವೇಳೆ ವಾಹನದಲ್ಲಿ ಚಲಿಸಲು ಭಯದ ವಾತಾವರಣ ಇದೆ. ಸದ್ಯ ಪ್ರಕರಣವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು