ಶೃಂಗೇರಿ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಶೃಂಗೇರಿಯ ಕಿರಕೋಡು ಸಮೀಪ ರಾತ್ರಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಶೃಂಗೇರಿ ಪಿಎಸ್ಐ ನೇತೃತ್ವದಲ್ಲಿ ದಾಳಿ ನಡೆಸಿ ಪಿಕ್ಅಪ್ (KA18D1900) ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಅಕ್ರಮ ಮರಳು ಸಾಗಾಟ ಮಾಡುವ ವಾಹನಗಳ ಮುಂಭಾಗ ಮಾತ್ರ ನಂಬರ್ ಪ್ಲೇಟ್ ಹೊಂದಿದ್ದು, ಹಿಂಭಾಗ ನಂಬರ್ ಪ್ಲೇಟ್ ಇಲ್ಲದೆ ಮರಳು ಸಾಗಾಟದ ದಂಧೆಗೆ ಇಳಿಯುತ್ತಿದ್ದಾರೆ.
ಅತ್ಯಂತ ವೇಗವಾಗಿ ವಾಹನವನ್ನು ಚಲಾಯಿಸುವುದರಿಂದ ಕೆಲವು ರಸ್ತೆಗಳಲ್ಲಿ ರಾತ್ರಿ ಸಮಯದ ವೇಳೆ ವಾಹನದಲ್ಲಿ ಚಲಿಸಲು ಭಯದ ವಾತಾವರಣ ಇದೆ. ಸದ್ಯ ಪ್ರಕರಣವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.