HOSANAGARA ; ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಯ ಜನೌಷಧಿ ಕೇಂದ್ರ ಕಳೆದ ನಾಲ್ಕು ವರ್ಷಗಳಿಂದ ಮುಚ್ಚಿದ್ದು ಈಗ ಮತ್ತೆ ಪುನರಾರಂಭಗೊಂಡಿದ್ದು ಈ ಜನೌಷಧಿ ಕೇಂದ್ರದ ಸದುಪಯೋಗ ಪಡೆಯುವಂತೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗುರುಮೂರ್ತಿ ಕೋರಿದ್ದಾರೆ.

ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಪ್ರತಿದಿನ 400 ರಿಂದ 500 ಹೊರರೋಗಿಗಳು ಬರುತ್ತಿದ್ದು ಚಿಕಿತ್ಸೆ ಪಡೆದ ರೋಗಿಗಳು ಆಸ್ಪತ್ರೆಯಲ್ಲಿ ದೊರಕದ ಔಷಧಿಗಳಿಗಾಗಿ ಖಾಸಗಿ ಔಷಧಾಲಯಗಳಿಗೆ ತೆರಳಿ ದುಬಾರಿ ಬೆಲೆಗೆ ಔಷಧಿ ಪಡೆಯಬೇಕಾಗಿತ್ತು. ಈಗ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಪುನರಾರಂಭಗೊಂಡಿದ್ದರಿಂದ ಕಡಿಮೆ ಬೆಲೆಯಲ್ಲಿ ಔಷಧಿ ಪರಿಕರಗಳನ್ನು ಈ ಕೇಂದ್ರದಿಂದ ಪಡೆಯಬಹುದಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.