ರಿಪ್ಪನ್ಪೇಟೆ ; ಕರ್ತವ್ಯದಲ್ಲಿರುವಾಗಲೇ ಪಾನಮತ್ತನಾದ ರಿಪ್ಪನ್ಪೇಟೆ ಪೊಲೀಸ್ ಕಾನ್ಸ್ಟೇಬಲ್ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಮಂಗಳವಾರ ನಡೆದಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಕ್ಕದ ರಸ್ತೆಯ ಅಂಚಿನಲ್ಲಿ ಕೆಲಕಾಲ ಮಲಗಿದ್ದ ಕಾನ್ಸ್ಟೇಬಲ್ ಶಿವಕುಮಾರ್, ಅರೆಗಣ್ಣು ತೆರೆದು ಮಂಪರಿನಲ್ಲಿ ಏನನ್ನೋ ಗೊಣಗುತ್ತಾ ರಸ್ತೆ ಸಂಚಾರಿಗಳ ಗಮನ ಸೆಳೆಯುತ್ತಿದ್ದರು.
ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ ಎನ್ನುತ್ತಲೇ ಮುಂದೆ ಸಾಗುತಿದ್ದರು.
ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಕಾನ್ಸ್ಟೇಬಲ್ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ತೋರುತಿದ್ದರು ಎಂದು ತಿಳಿದು ಬಂದಿದೆ.
ಇಲಾಖೆಯ ಮೇಲಾಧಿಕಾರಿಗಳು ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯಿಸಿ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾರೆ ಎಂದು ಸ್ಥಳೀಯರು ಆರೋಪಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.