ಶಿವಮೊಗ್ಗ ; ಠಾಣೆಯಲ್ಲೇ ನೇಣಿಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್ !

Written by Mahesha Hindlemane

Published on:

ಶಿವಮೊಗ್ಗ ; ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೊಹಮದ್‌ ಝಕ್ರಿಯ (55) ನೇಣಿಗೆ ಶರಣಾದ ಹೆಡ್‌ ಕಾನ್‌ಸ್ಟೇಬಲ್‌. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ನಿನ್ನೆ ರಾತ್ರಿ ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ರಾತ್ರಿ ಠಾಣೆಯಲ್ಲೇ ಮೊಹಮದ್‌ ಝಕ್ರಿಯ ಅವರು ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

‘ಅವರಿಗೆ ಅರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್ ನಲ್ಲಿ ಡೆತ್‌ನೋಟ್ ಫಾರ್ವರ್ಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಅಂತ ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ.’
– ನಿಖಿಲ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Leave a Comment