ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

Written by Mahesha Hindlemane

Updated on:

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ ಇತರೆಡೆಗಳಲ್ಲಿ ಡಕಾಯಿತಿ ನಡೆಸಿದ್ದ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಲೆಂದು ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಶಿಕಾರಿಪುರ ಸಮೀಪದ ಕೆಂಗುಡ್ಡೆ ಬಳಿ ಘಟನೆ ಈ ನಡೆದಿದೆ.

ಆರೋಪಿ ಶ್ರೀನಿವಾಸ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಪಿಎಸ್ಐ ಕುಮಾರ್ ಮೇಲೆ ಹಲ್ಲೆ ನಡೆಸಿ, ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಶ್ರೀನಿವಾಸ್ ಗೆ ಶರಣಾಗಲು ಸಬ್ ಇನ್ಸ್ಪೆಕ್ಟರ್ ಕುಮಾರ್ ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚನೆ ನೀಡಿದರೂ ಮಾತು ಕೇಳದ ಹಿನ್ನೆಲೆಯಲ್ಲಿ ಪಿಎಸ್ಐ ಕುಮಾರ್ ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಬಳಿಕ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment