ರಿಪ್ಪನ್ಪೇಟೆ : ಇನ್ನೂ ಹಬ್ಬಗಳು ಎರಡು ತಿಂಗಳುಗಳಿರುವಾಗಲೇ ರಿಪ್ಪನ್ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸುವುದರೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ನೇತೃತ್ವದಲ್ಲಿ ತಮ್ಮ ಪೊಲೀಸ್ ಸಿಬ್ಬಂದಿಗಳು ಹಾಗೂ ಎಸ್.ಎ.ಎಫ್ ವಿಶೇಷ ಪೊಲೀಸ್ ಪಡೆಯ ಪೊಲೀಸರು ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮೂಲಕ ಹೊಸನಗರ-ಸಾಗರ-ತೀರ್ಥಹಳ್ಳಿ ಮತ್ತು ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ ಜಾಥಾ ನಡೆಸುವುದರೊಂದಿಗೆ ಸಾರ್ವಜನಿಕರಲ್ಲಿ ಶಾಂತಿ ಸುವ್ಯವಸ್ಥೆಯ ಬಗ್ಗೆ ಜನಜಾಗೃತಿ ಮೂಡಿಸಿದರು.

ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ, ಎಸ್.ಎ.ಎಫ್ ವಿಶೇಷ ಪೊಲೀಸ್ ಪಡೆಯ ಇನ್ಸ್ಪೆಕ್ಟರ್ ಕಿರಣ್ ಹಾಗೂ ಎಎಸ್ಐಗಳಾದ ಹಾಲಪ್ಪ ವಿನೋದ್ ಇನ್ನಿತರ ಸಿಬ್ಬಂದಿವರ್ಗ ಹಾಜರಿದ್ದರು.


