ಶಿವಮೊಗ್ಗ: ಮೆಸ್ಕಾಂ ಘಟಕ-2ರ ನಗರ ಉಪವಿಭಾಗ 1ರ ವ್ಯಾಪ್ತಿಯಲ್ಲಿ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲೆಯ ಪಂಚಾಯಿತಿ ಎದುರಿನಲ್ಲಿ ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿಯು ಜಾರಿಯಲ್ಲಿದೆ. ಈ ಕಾರಣದಿಂದಾಗಿ ಜೂನ್ 29,ಭಾನುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
- ರಾಘವೇಂದ್ರ ಸ್ವಾಮಿ ಮಠದ ರಸ್ತೆ
- ತಿಲಕ್ನಗರ
- ರತ್ನಮ್ಮ ಮಾಧವ್ರಾವ್ ರಸ್ತೆ
- ಕುವೆಂಪು ರಸ್ತೆ
- ಪಾರ್ಕ್ ಬಡಾವಣೆ
- ದುರ್ಗಿಗುಡಿ
- ಶಿವಮೂರ್ತಿ ಸರ್ಕಲ್
- ಜಿಲ್ಲಾ ಪಂಚಾಯಿತಿ ರಸ್ತೆ ಸುತ್ತಮುತ್ತಲಿನ ಪ್ರದೇಶ
ಆಲ್ಕೊಳ ವಿ.ವಿ. ಕೇಂದ್ರದ ಎ.ಎಫ್-8 ಫೀಡರ್ನಲ್ಲಿ ತುರ್ತು ಕಾಮಗಾರಿ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ
ಕಾರಣ: ಎ.ಎಫ್-8 ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾರ್ಯ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
- ಲಕ್ಷೀಪುರ
- ಕೆಂಚಪ್ಪ ಲೇಔಟ್
- ಎನ್.ಎಂ.ಸಿ. ಕಾಂಪೌಂಡ್
- ಸೂಡಾ ಕಚೇರಿ
- ಪೊಲೀಸ್ ಚೌಕಿ
- ಸವಿ ಬೇಕರಿ ಎದುರು
- 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶ
ಮೆಸ್ಕಾಂ ಪ್ರಕಟಣೆಯಂತೆ, ಸಾರ್ವಜನಿಕರು ಈ ತಾತ್ಕಾಲಿಕ ತೊಂದರೆಗೆ ಸಹಕರಿಸಬೇಕೆಂದು ಕೋರಲಾಗಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣ ವಿದ್ಯುತ್ ಸರಬರಾಜು ಪುನಃ ಆರಂಭಗೊಳ್ಳಲಿದೆ.
Read More :ವಾಹನ ಖರೀದಿಗೆ ಸಿಗಲಿದೆ ₹3 ಲಕ್ಷ ಸಬ್ಸಿಡಿ! ‘ಸ್ವಾವಲಂಬಿ ಸಾರಥಿ’ ಯೋಜನೆಗೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ !
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.