ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ !

Written by Mahesh Hindlemane

Published on:

HOSANAGARA | ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಅನಾಹುತಗಳು ನಡೆಯುತ್ತಿವೆ.

WhatsApp Group Join Now
Telegram Group Join Now
Instagram Group Join Now

ಇಂದು ಬೆಳಗ್ಗೆ ಚಲಿಸುತ್ತಿದ್ದ ಸರ್ಕಾರಿ ಬಸ್ (KSRTC Bus) ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೇಕಟ್ಟೆ – ನಿಟ್ಟೂರು ಮಾರ್ಗದಲ್ಲಿ ನಡೆದಿದೆ.

ಬಸ್‌ನ ಹಿಂಬದಿಯ ಒಂದು ಬದಿಗೆ ವಿದ್ಯುತ್ ಕಂಬ ತಂತಿ ಸಮೇತ ಬಿದ್ದಿದ್ದು ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ‌.

ಬಸ್ ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು ಕಡೆ ಚಲಿಸುತ್ತಿತ್ತು‌. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ತೆರವುಗೊಳಿಸಿ ಸಂಚಾರ ಅನುವುಮಾಡಿಕೊಟ್ಟರು‌.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment