ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ವಿಕಾಸ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಪ್ರಜ್ವಲ ಹೆಚ್.ಪಿ. ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಮಳಲಿ ಗ್ರಾಮದ ಹಿರಿಮನೆ ನಿವಾಸಿ, ಶೈಲಜಾ ಮತ್ತು ಪಾಂಡುರಂಗ ಗೌಡ ದಂಪತಿಗಳ ಪುತ್ರನಾದ ಪ್ರಜ್ವಲ್ 600ಕ್ಕೆ 594 ಅಂಕ ಗಳಿಸಿ ಶೇ.99 ರಷ್ಟು ಫಲಿತಾಂಶದ ಸಾಧನೆ ಮಾಡಿದ್ದಾರೆ.
ಅರ್ಥಶಾಸ್ತ್ರದಲ್ಲಿ 100, ಬ್ಯುಸಿನಸ್ ಸ್ಟಡೀಸ್ ನಲ್ಲಿ 100, ಅಕೌಂಟೆನ್ಸಿಯಲ್ಲಿ 100 ಅಂಕ ಗಳಿಸಿದರೆ, ಸ್ಟಾಟಿಟಿಕ್ಸ್ ನಲ್ಲಿ 99, ಕನ್ನಡದಲ್ಲಿ 99, ಇಂಗ್ಲೀಷ್ನಲ್ಲಿ 94 ಅಂಕ ಪ್ರಜ್ವಲ್ ಗಳಿಸಿದ್ದಾರೆ.

ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಜ್ವಲ್ ಪಿಯುಸಿಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿತು ಜಿಲ್ಲೆಗೆ ಟಾಪರ್ ಆಗಿರುವುದು ವಿಶೇಷವಾಗಿದೆ.
ಮುಂದೆ ಐಎಎಸ್ ಮಾಡಬೇಕು ಎಂಬಲ ಹೊಂದಿರುವ ಪ್ರಜ್ವಲ್ ಸಾಧನೆಯನ್ನು ತಂದೆ ಪಾಂಡುರಂಗ, ತಾಯಿ ಶೈಲಜಾ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಾ.ಜಿ.ಸುಧಾಕರ್ ಅಭಿನಂದಿಸಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?