RIPPONPETE ; ಬರುವ ನವೆಂಬರ್ ತಿಂಗಳಲ್ಲಿ ಸಾಗರ ಪ್ರಾಂತ್ಯದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು ಈ ಸಮಾವೇಶದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ ಅಡಿಕೆ ಬೆಳೆಗಾರರೊಂದಿಗೆ ಸಮಾಲೋಚಿಸಿ ಕೈಗೊಳ್ಳಬಹುದಾದ ನಿರ್ಣಯದ ಕುರಿತು ಅಡಿಕೆ ಬೆಳೆಗಾರರ ಪೂರ್ವಭಾವಿ ಸಭೆಯು ರಿಪ್ಪನ್ಪೇಟೆಯ ಶಿವಮಂದಿರದಲ್ಲಿ ಇಂದು ಜರುಗಿತು.
ಈ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುಖಂಡ ಹಕ್ರೆ ಮಲ್ಲಿಕಾರ್ಜುನ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಡಿಕೆ ಸೇವನೆಯಿಂದ ಮಾರಕ ರೋಗ ಹರಡುವುದೆಂಬ ತಪ್ಪು ನಿರ್ಧಾರವನ್ನು ಕೈಬಿಟ್ಟು ಆ ಬೆಳೆಯ ಬಗ್ಗೆ ಸಂಶೋಧನೆ ನಡೆಸಿ ಬೆಳೆಗಾರರ ಹಿತ ರಕ್ಷಣೆ ಮಾಡುವುದು ಮತ್ತು ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರ ರೈತರಿಗೆ ಒಂದು ಹೆಕ್ಟೇರ್ ಜಮೀನು ಮಂಜೂರು ಮಾಡುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡರ ಹೇಳಿಕೆಯನ್ನಾದರಿಸಿ ಮಂಜೂರಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು ಅದೇ ನಿಯಮದಡಿ ಶಿವಮೊಗ್ಗ ಜಿಲ್ಲೆಯ ಇತರ ತಾಲ್ಲೂಕುಗಳಲ್ಲಿ ಕೆ.ಪಿ.ಟಿ.ಸಿ.ಎಲ್ ಮತ್ತು ಗ್ರಾಮ ಠಾಣಾ ಸೊಪ್ಪಿನಬೆಟ್ಟ ಹೀಗೆ ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ಭೂಮಿಯ ಹಕ್ಕು ನೀಡುವುದು ಹೀಗೆ ಅಡಿಕೆ ಬೆಳೆಗಳಲ್ಲಿ ಕಾಣಿಸಿಕೊಂಡಿರುವ ಮಾರಕ ರೋಗಗಳಾದ ಎಲೆಚುಕ್ಕೆ ರೋಗ ಬೇರು ಹುಳು ಹತ್ತು ಹಲವು ರೋಗಗಳಿಂದಾಗಿ ರೈತರು ದಿಕ್ಕು ತಪ್ಪುವಂತಾಗಿದ್ದಾರೆ. ಅಲ್ಲದೆ ಹೊರದೇಶದಿಂದ ಭಾರತಕ್ಕೆ ಬರುತ್ತಿರುವ ಅಡಿಕೆ ತಡೆಯುವುದು ಸೇರಿದಂತೆ ಹಲವು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸುವ ಉದ್ದೇಶದಿಂದ ಬರುವ ನವೆಂಬರ್ನಲ್ಲಿ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಆಯೋಜಿಸಲಾಗಿದ್ದು ಈ ಸಮಾವೇಶದಲ್ಲಿ ಕೇಂದ್ರ ಸಚಿವರು ಮತ್ತು ರಾಜ್ಯದ ಸಚಿವರುಗಳನ್ನು ಆಹ್ವಾನಿಸಿ ಅವರಿಗೆ ನಮ್ಮ ಸಮಸ್ಯೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಅಡಿಕೆ ಹಾನಿಕಾರಕವಲ್ಲ ಎಂಬ ಬಗ್ಗೆ ಮನವರಿಕೆ ಮಾಡುವ ಮೂಲಕ ಅಡಿಕೆ ಬೆಳೆಗಾರ ಸಮಸ್ಯೆಗೆ ಶಾಶ್ವತ ಪರಿಕಲ್ಪಿಸುವಂತೆ ಆಗ್ರಹಿಸಲು ಪೂರ್ವಭಾವಿ ಸಭೆಯನ್ನು ನಡೆಸಲಾಗುತ್ತಿದೆ.
ಅಲ್ಲದೆ ಶೀಘ್ರದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಂಘಟನೆಯ ಕುರಿತು ಎಚ್ಚರಿಸಲು ಸುಮಾರು 12 ಸಾವಿರಕ್ಕೂ ಅಧಿಕ ಅಡಿಕೆ ಬೆಳೆಗಾರ ಬೃಹತ್ ಜಾಗೃತಿ ಜಾಥಾವನ್ನು ನಡೆಸಲಾಗುವುದು ಈ ಜಾಥಾಕ್ಕೂ ಹೆಚ್ಚಿನ ಬೆಂಬಲ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಸಾಗರ ಪ್ರಾಂತ್ಯದ ಅಡಿಕೆ ಬೆಳೆಗಾರ ಸಂಘದ ಮುಖಂಡ ಯು.ಹೆಚ್.ರಾಮಪ್ಪ, ಹೆಚ್.ಎಂ.ವರ್ತೇಶ್ ಗೌಡ, ಬೆಳಂದೂರು ಬಿ.ಹೆಚ್.ನಾಗಭೂಷಣ, ಹೆಚ್.ಎಸ್.ರವಿ ಹಾಲುಗುಡ್ಡೆ, ಡಿ.ಈ.ಮಧುಸೂದನ್, ಡಿ.ವಿ.ಬಸವರಾಜ ದೊಂಬೆಕೊಪ್ಪ, ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ದೇವೇಂದ್ರಪ್ಪಗೌಡ ನೆವಟೂರು, ರಾಜೇಂದ್ರಗೌಡ ನೆವಟೂರು, ಕಮದೂರು ಕೆ.ಎನ್.ರಾಜಶೇಖರ, ಬೆನವಳ್ಳಿ ಲಿಂಗಪ್ಪ, ಡಿ.ಎಸ್. ಕರುಣೇಶ್ ಇನ್ನಿತರ ಹಲವು ರೈತರು ಭಾಗವಹಿಸಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು