ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಮುಜರಾಯಿ ದೇವಸ್ಥಾನಗಳಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ರಿಪ್ಪನ್ಪೇಟೆ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ತಮ್ಮಡಿಕೊಪ್ಪ ಈ ದೇವಸ್ಥಾನಗಳ ಅರ್ಚಕರ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ;
- ಅರ್ಚಕರಾಗಲು 21 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ವಯಸ್ಸು ಮೀರಿರಬಾರದು.
- ವೇದ ಮಂತ್ರ ಸ್ವಷ್ಟವಾಗಿ ಪಟಿಸಲು ಕಲಿತಿರಬೇಕು.
- ಆಗಮ ಶಾಸ್ತ್ರದಲ್ಲಿ ಉತ್ತೀರ್ಣರಾಗಿರುವ ಬಗ್ಗೆ ಪ್ರಮಾಣಪತ್ರ ಹೊಂದಿರಬೇಕು.
- ಅರ್ಚಕರಾಗಿ ಕನಿಷ್ಟ 3 ವರ್ಷ ಸೇವೆ ಸಲ್ಲಿಸಿರುವ ಅನುಭವ ಇರಬೇಕು.
ಆಸಕ್ತರು ಹೊಸನಗರ ತಾಲ್ಲೂಕು ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಯನ್ನು ಕೆರೆಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಹೊಸನಗರ ತಹಸೀಲ್ದಾರ್ ಭರತ್ರಾಜ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

