Shivamogga

ಶಿವಮೊಗ್ಗ : ಸಕ್ರೆಬೈಲು ಆನೆ ಶಿಬಿರಕ್ಕೆ ಪಿಸಿಸಿಎಫ್ ಭೇಟಿ !

ಶಿವಮೊಗ್ಗ –ಸಕ್ರೆಬೈಲು ಆನೆ ಶಿಬಿರದಲ್ಲಿ ಆನೆಗಳ ಆರೈಕೆಯ ಕೊರತೆ, ರೋಗ ಪೀಡಿತ ಸ್ಥಿತಿ ಮತ್ತು ನಿರ್ಲಕ್ಷ್ಯದಿಂದ ಹಲವು ಆನೆಗಳ ಸಾವು ಸಂಭವಿಸಿದೆ ಎಂಬ ಆರೋಪಗಳ ಬೆನ್ನಲ್ಲೇ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (PCCF) ನಿನ್ನೆ ಶಿಬಿರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸೆರೆ ಹಿಡಿದ “ವಿಕ್ರಾಂತ” ಎಂಬ ಕಾಡಾನೆ ಸಕ್ರೆಬೈಲಿಗೆ ತರಲಾಗಿದ್ದು, ಅವನ ಆರೋಗ್ಯ ಗಂಭೀರವಾಗಿರುವುದರಿಂದ ಸ್ಥಳೀಯರು ಮತ್ತು ಪ್ರಾಣಿ ಹಿತಾಸಕ್ತಿ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ವಿಕ್ರಾಂತನ ಸ್ಥಿತಿ:

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸಕಲೇಶಪುರದ ಕಾಡಿನಲ್ಲಿ ಬಲಿಷ್ಠನಾಗಿದ್ದ ವಿಕ್ರಾಂತ, ಈಗ ಸಕ್ರೆಬೈಲು ಶಿಬಿರದ ಕ್ರಾಲ್‌ನಲ್ಲಿ ದುರ್ಬಲ, ಗಾಯಗಳಿಂದ ಬಳಲುತ್ತಿರುವ ದೃಶ್ಯ ಸ್ಥಳೀಯರ ಹೃದಯವನ್ನು ಕಲುಕುತ್ತಿದೆ. “ಕಾಡಿನ ರಾಜನನ್ನು ನರಕಯಾತನೆ ಅನುಭವಿಸುವಂತೆ ಮಾಡಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಸಿಸಿಎಫ್ ಭೇಟಿಯಿಂದ ಸಮಸ್ಯೆಗೆ ಬೆಳಕು ಚೆಲ್ಲಿದರೂ, ಶಿಬಿರದಲ್ಲಿ ಆನೆಗಳಿಗೆ ಬೇಕಾದ ವೈದ್ಯಕೀಯ, ಪೌಷ್ಠಿಕ ಆಹಾರ ಮತ್ತು ಆರೋಗ್ಯಪೂರ್ಣ ನಿರ್ವಹಣೆ ತಕ್ಷಣ ಜಾರಿಗೆ ಬರಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ “ಆನೆ ಸಂರಕ್ಷಣೆ” ಎಂಬ ಶಿಬಿರದ ಉದ್ದೇಶವೇ ಪ್ರಶ್ನಾರ್ಥಕವಾಗಲಿದೆ.

ಆನೆಗಳ ಆರೈಕೆಯಲ್ಲಿ ನಿರ್ಲಕ್ಷ್ಯ? ಸಕ್ರೆಬೈಲು ಆನೆ ಶಿಬಿರದಲ್ಲಿ ನೋವಿನಿಂದ ನರಳುತ್ತಿರುವ ವಿಕ್ರಾಂತ ಆನೆ ಎಂದು ನಿಮ್ಮ ಮಲ್ನಾಡ್ ಟೈಮ್ಸ್ ವರದಿ ಮಾಡಿತ್ತು ,

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650