ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಸ್ನಲ್ಲಿ ಹಾಗೂ ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಮೂಲದ ಬಸ್ ಹಾಗೂ ಶಿವಮೊಗ್ಗ ಮೂಲದ ಕಾರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

