ರಿಪ್ಪನ್ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂ.ಎಸ್.ಐ.ಎಲ್. ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಎಂ.ಎಸ್.ಐ.ಎಲ್. ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು.
ಪ್ರತಿಭಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಎಸ್.ಪಿ.ಪ್ರವೀಣ್ ಹಾಗೂ ಸಿಬ್ಬಂದಿವರ್ಗ ಹಾಗೂ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ನಾಗರಾಜ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರ ಬೇಡಿಕೆಯನ್ನು ಕೇಳಿ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರತಿಭಟನಾನಿರತರು ಈ ಗ್ರಾಮಕ್ಕೆ ಒಂದೇ ರಸ್ತೆ ಇದ್ದು ಈ ರಸ್ತೆಯ ಮೂಲಕವೇ ನಡೆದುಕೊಂಡು ಹೋಗಬೇಕಿದೆ. ಮಹಿಳೆಯರು, ಯುವತಿಯರು, ಮಕ್ಕಳಿಗೆ ಮದ್ಯದಂಗಡಿಗೆ ಬರುವ ಕೆಲ ಕಿಡಿಗೇಡಿಗಳಿಂದ ಕಿರಿಕಿರಿಯಾಗುತ್ತಿದೆ. ಕೆಲವರು ರೇಗಿಸಿದುಂಟು. ತುಂಬಾ ತೊಂದರೆ ಆಗುತ್ತಿದ್ದು ಕೂಡಲೇ ಮದ್ಯದಂಗಡಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಖರೀದಿಸಿದ ಮದ್ಯವನ್ನು ಜಮೀನಿನಲ್ಲಿ, ಮನೆಯ ಹಿಂಭಾಗದಲ್ಲಿ ಬಂದು ಸೇವನೆ ಮಾಡಿ ಬಾಟಲಿಗಳನ್ನು ಮನಸೋ ಇಚ್ಚೆ ಎಲ್ಲೆಂದರಲ್ಲಿ ಬಿಸಾಕಿ ಗ್ರಾಮದ ಕಲುಷಿತ ವಾತಾವರಣವನ್ನು ಸೃಷ್ಟಿಸುವಂತೆ ಮಾಡುತ್ತಿದ್ದು ಸಂಜೆ 6 ಗಂಟೆಯ ಮೇಲೆ ಮಹಿಳೆಯರು ಮತ್ತು ಮಕ್ಕಳು ಮನೆಯಿಂದ ಹೊರಬರಲು ಹಿಂಜರಿಯುವಂತ ಸನ್ನಿವೇಶವುಂಟಾಗಿದೆ ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ರವೀಂದ್ರ ಕೆರೆಹಳ್ಳಿ, ಟೀಕಪ್ಪಗೌಡ, ಶಾಂತಮ್ಮ, ಜಯಮ್ಮ, ಹೇಮಾವತಿ, ವನಿತಾ, ಮುರುಳಿ ಕೆರೆಹಳ್ಳಿ, ಮಂಜುನಾಥಗೌಡ, ಸಂತೋಷ, ಸಚಿನ್ಗೌಡ, ಅವಿನಾಶ್, ಗಣೇಶ, ಇನ್ನಿತರರು ಪಾಲ್ಗೊಂಡು ಪ್ರತಿಭಟನೆ ನಡೆಸಿ, ಅಬಕಾರಿ ಇಲಾಖೆಯವರಿಗೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಕಳುಹಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು