ರಿಪ್ಪನ್ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು.

ರಿಪ್ಪನ್ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್ನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್. ಘಟಕ ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರು ಮಕ್ಕಳು ಅಬಲರಾಗಿದ್ದು ಪ್ರತಿರೋಧ ಒಡ್ಡಲು ಅಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಆಮಿಷವೊಡ್ಡುವ ಮುಖಾಂತರ ಅವರನ್ನು ಕರೆದೊಯ್ದ ಜೀತ ಪದ್ದತಿ ಇಲ್ಲವೆ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನಕೃತ್ಯ ನಿರಂತರವಾಗಿ ನಡೆಯುತ್ತಿದೆ. ಅಲ್ಲದೆ ಶಾಲಾ-ಕಾಲೇಜ್ ಬಳಿಯಲ್ಲಿ ಅಕ್ರಮವಾಗಿ ಗಾಂಜಾದಂತಹ ಮತ್ತುಭರಿಸುವ ಮಾಧಕ ವಸ್ತುಗಳ ಮಾರಾಟರಾರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಹತ್ತಿರದ ಠಾಣೆಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೋ.ಹೆಚ್.ಎಸ್.ವಿರೂಪಾಕ್ಷಪ್ಪ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರೋ.ರಾಜು ಬಿ.ಎಲ್., ಪ್ರೋ.ರಾಜು ಕೆ.ಆರ್., ಇನ್ನಿತರ ಉಪನ್ಯಾಸಕ ವೃಂದ ಹಾಜರಿದ್ದರು.


ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.