ಹೊಸನಗರ

ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್. ಘಟಕ ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರು ಮಕ್ಕಳು ಅಬಲರಾಗಿದ್ದು ಪ್ರತಿರೋಧ ಒಡ್ಡಲು ಅಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಆಮಿಷವೊಡ್ಡುವ ಮುಖಾಂತರ ಅವರನ್ನು ಕರೆದೊಯ್ದ ಜೀತ ಪದ್ದತಿ ಇಲ್ಲವೆ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನಕೃತ್ಯ ನಿರಂತರವಾಗಿ ನಡೆಯುತ್ತಿದೆ. ಅಲ್ಲದೆ ಶಾಲಾ-ಕಾಲೇಜ್ ಬಳಿಯಲ್ಲಿ ಅಕ್ರಮವಾಗಿ ಗಾಂಜಾದಂತಹ ಮತ್ತುಭರಿಸುವ ಮಾಧಕ ವಸ್ತುಗಳ ಮಾರಾಟರಾರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಹತ್ತಿರದ ಠಾಣೆಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೋ.ಹೆಚ್.ಎಸ್.ವಿರೂಪಾಕ್ಷಪ್ಪ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರೋ.ರಾಜು ಬಿ.ಎಲ್., ಪ್ರೋ.ರಾಜು ಕೆ.ಆರ್., ಇನ್ನಿತರ ಉಪನ್ಯಾಸಕ ವೃಂದ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]