ತೀರ್ಥಹಳ್ಳಿ:ಜುಲೈ 6 ರಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರು ತೀರ್ಥಹಳ್ಳಿ ತಾಲೂಕಿನ ಶ್ರೀರಾಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಕಾಂಗ್ರೆಸ್ ಪ್ರಮುಖರು, ಸಹಕಾರ ಕ್ಷೇತ್ರದ ನಾಯಕರೂ, ಅಭಿಮಾನಿಗಳು ಹಾಗೂ ಬೆಂಬಲಿಗರು ಗೌಡರೊಂದಿಗೆ ಭಾಗವಹಿಸಿದರು.
ಇದಕ್ಕೂ ಮುನ್ನ, ಜಿಲ್ಲಾ ಸಹಕಾರ ಬ್ಯಾಂಕ್ ನ ನಕಲಿ ಬಂಗಾರದ ಹಗರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್ ಗೌಡ ಅವರಿಗೆ ಕರ್ನಾಟಕ ಹೈಕೋರ್ಟ್ ಜುಲೈ 2 ರಂದು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು.
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.